Breaking News

ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!

ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಜೀವ ದಹನವಾಗಿದ್ದಾರೆ. ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದ ಅವರ ದೇಹವನ್ನು ಕೈಯಲ್ಲಿದ್ದ ಉಂಗುರ ಮತ್ತು ಕಾರ್ ನಂಬರ್ ಪ್ಲೇಟ್‌ನಿಂದ ಪತ್ತೆಹಚ್ಚಲಾಗಿತ್ತು.ಹುಬ್ಬಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆದು ಶವ ಹಸ್ತಾಂತರ ಮಾಡಲಾಯಿತು. ಎತ್ತರದ ಕಟ್ಟುಮಸ್ತಾದ ವ್ಯಕ್ತಿಯಾಗಿದ್ದ ಪಂಚಾಕ್ಷರಿ ಸಾಲಿಮಠ ಅವರ ದೇಹ ಎಷ್ಟು ಮಟ್ಟಿಗೆ ಸುಟ್ಟು ಹೋಗಿತ್ತೆಂದರೆ, ಚಿಕ್ಕ ಮಕ್ಕಳ ಮೃತದೇಹ ಎನ್ನುವಂತೆ ಅವರ ಶವ ಕಾಣುತ್ತಿತ್ತು.ಅವರ ಈ ಸಾವು ನಮ್ಮೆಲ್ಲರಿಗೂ ಬಹುದೊಡ್ಡ ಆಘಾತ ತಂದಿದೆ. ಅವರ ಕುಟುಂಬಸ್ಥರಿಗೆ ಬಹುದೊಡ್ಡ ಆಘಾತ ತಂದಿದೆ. ದೇವರು ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲಿ ಎಂದು ಶಶಿಕುಮಾರ್‌ ಅವರು ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *