Breaking News

ಪ್ರೀ ವೆಡ್ಡಿಂಗ್ ಶೂಟ್’ ಮುಗಿಸಿ ಬರುವಾಗ ಕೊಪ್ಪಳದಲ್ಲಿ ಅಪಘಾತ , ಮದುವೆ ಆಗಬೇಕಿದ್ದ ‘ಜೋಡಿ’ ದುರ್ಮರಣ.!

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬರುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾವಿ ದಂಪತಿ ಮೃತಪಟ್ಟಿದ್ದಾರೆ.ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಬಣಕಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ,ಆದರೆ ಬೈಕ್ ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.ಮೃತರನ್ನ ಕೊಪ್ಪಳ ತಾಲೂಕಿನ ಇರಕಲ್ಲಗಢ ಗ್ರಾಮದ ಕರಿಯಪ್ಪ ಮಡಿವಾಳ(26), ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಕವಿತಾ(19) ಎಂದು ಗುರುತಿಸಲಾಗಿದೆ. ಡಿಸೆಂಬರ್ 21ರಂದು ಇವರಿಬ್ಬರ ಮದುವೆ ನಿಶ್ಚಯವಾಗಿತ್ತು.ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಸಂಬಂಧ ಲಾರಿ ಚಾಲಕನನನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *