Breaking News

ಕಾಫಿ ತೋಟದಲ್ಲಿ ಅಕ್ರಮ ಗೋಹತ್ಯೆ; ಮೂವರ ಬಂಧನ!

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರು ಕಾಫಿ ಎಸ್ಟೇಟ್‌ನಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಎರಡು ದನಗಳನ್ನು ಕದ್ದು ಕಾಫಿ ತೋಟದಲ್ಲಿ ಹತ್ಯೆ ಮಾಡಿ ಮಾಂಸ ಹಂಚಿಕೆ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.ಸ್ಥಳೀಯರು ಇವರು ಅಸ್ಸಾಂನವರಲ್ಲ, ಅಕ್ರಮ ಬಾಂಗ್ಲಾ ವಲಸಿಗರೆಂದು ಆರೋಪಿಸಿದ್ದಾರೆ. ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿದ ಬಾಳೆಹೊನ್ನೂರು ಪೊಲೀಸರು, ಆರೋಪಿಗಳಾದ ಅನ್ಸರ್, ಮಜೀದ್, ಮತ್ತು ಮುಜಾಮಿಲ್ ಎಂಬುವವರನ್ನು ಬಂಧಿಸಿ, ಗೋಮಾಂಸ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *