ಹಾಸನ: ಅರಕಲಗೂಡು ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.ಅರಕಲಗೂಡು ತಾಲೂಕು ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು.ಕೊಣನೂರು ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.ಆದರೂ, ಅಷ್ಟರಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

