ಕೊರಟಗೆರೆ ತಾಲ್ಲೂಕು ಕುರಂಕೋಟೆ ಗ್ರಾಮದ ಚಿನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ದೇವರಾಜು (56) ಎಂಬುವರು ಸೋಮವಾರ ರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಶಾಲೆ ವಿದ್ಯಾರ್ಥಿನಿ ಜತೆಗೆ ದೇವರಾಜು ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ.ಈ ಸಂಬಂಧ ಕೆಲವು ಹಿರಿಯರು ಸೇರಿಕೊಂಡು ವಿದ್ಯಾರ್ಥಿನಿ ಕುಟುಂಬದವರ ಜತೆಗೆ ರಾಜಿ ಸಂಧಾನ ನಡೆಸಿದ್ದರು. ಇದರ ನಡುವೆ ಕೆಲವು ಮಧ್ಯವರ್ತಿಗಳು, ಯೂಟೂಬ್ ಪತ್ರಕರ್ತರು ಎಂದು ಹೇಳಿಕೊಂಡವರು ಹಣಕ್ಕಾಗಿ ಪೀಡಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

