Breaking News

ಕರ್ನಾಟಕಕ್ಕೆ ಬೇಕಾಗಿದ್ದ ಕ್ರಿಮಿನಲ್‌ ಉತ್ತರ ಪ್ರದೇಶದಲ್ಲಿ ಎನ್‌ಕೌಂಟರ್‌

ಮುಜಾಫರ್‌ನಗರ: ಹಲವು ಪ್ರಕರಣಗಳಲ್ಲಿ ಕರ್ನಾಟಕ ಪೊಲೀಸರು ಹುಡುಕುತ್ತಿದ್ದ ಕುಖ್ಯಾತ ಕ್ರಿಮಿನಲ್‌ವೊಬ್ಬ ಉತ್ತರ ಪ್ರದೇಶದಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಈತನ ತಲೆಗೆ 50000 ರೂ. ಬಹುಮಾನ ಘೋಷಿಸಲಾಗಿತ್ತು. ಇಟ್ಟಿಗೆ ಗೂಡೊಂದರ ಬಳಿ ಡಕಾಯಿತರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದರು.ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಕ್ರಿಮಿನಲ್‌ ಸಮಯ್‌ದೀನ್‌ (35) ಮೃತಪಟ್ಟಿದ್ದಾನೆ. ಆದರೆ ಆತನ 5 ಮಂದಿ ಸಹಚರರು ತಪ್ಪಿಸಿಕೊಂಡರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *