Breaking News

ಹೊನ್ನುಡಿಕೆ ಬಳಿ ಬೊಲೆರೊ ಡಿಕ್ಕಿ: ಬೈಕ್‌ ಸವಾರ ಸಾವು

ತುಮಕೂರು: ತಾಲ್ಲೂಕಿನ ಹೊನ್ನುಡಿಕೆ ಬಳಿ ಸೋಮವಾರ ಬೈಕ್‌ಗೆ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಕಿರಣ್‌ (20) ಮೃತಪಟ್ಟಿದ್ದಾರೆ.ಕಿರಣ್ ಮಾಗಡಿ ತಾಲ್ಲೂಕು ಕುದೂರು ಬಳಿಯ ಶ್ರೀಗಿರಿಪುರದ ನಿವಾಸಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸ್ವಗ್ರಾಮದಿಂದ ಹೊನ್ನುಡಿಕೆ ಮಾರ್ಗವಾಗಿ ನಗರದ ಕಡೆಗೆ ಬರುವಾಗ ನಗರದಿಂದ ತೆರಳುತ್ತಿದ್ದ ಬೊಲೆರೊ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *