Breaking News

DCC ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಲಾಕ್

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಅರೆಸ್ಟ್​ ಮಾಡಿದ್ದಾರೆ.ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು.ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್​ ನ್ಯಾಯಾಲಯ​, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *