Breaking News

ಶಿವಶಂಕರಪ್ಪ ಅಂತಿಮ ದರ್ಶನದ ವೇಳೆ ವ್ಯಕ್ತಿಯ ಜೇಬಿಗೆ ಕತ್ತರಿ: ₹36 ಸಾವಿರ ಕಳವು

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ಬಂದಿದ್ದ ನಗರದ ವ್ಯಕ್ತಿಯೊಬ್ಬರ ಜೇಬಿನಿಂದ ದುಷ್ಕರ್ಮಿಗಳು ₹36,000 ನಗದು ಕಳವು ಮಾಡಿರುವ ಘಟನೆ ತಡವಾಗಿ ಗೊತ್ತಾಗಿದೆ.ನಗರದ ಬಿಐಟಿ ಲೇಔಟ್ ನಿವಾಸಿಯೊಬ್ಬರು ಅಂತಿಮ ದರ್ಶನ ಪಡೆಯಲು ಎಂಸಿಸಿ ‘ಬಿ’ ಬ್ಲಾಕ್‌ನಲ್ಲಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸದ ಬಳಿಗೆ ಬಂದಿದ್ದರು. ಈ ವೇಳೆ ಗೇಟ್‌ ಬಳಿ ಭಾರಿ ಸಂಖ್ಯೆಯ ಜನರು ಸೇರಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು, ವ್ಯಕ್ತಿಯ ಪ್ಯಾಂಟ್ ಜೇಬು ಕತ್ತರಿಸಿ ಅದರಲ್ಲಿದ್ದ ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *