ಕರಾಟೆ ತರಬೇತುದಾರನಿಗೆ ಗೌರವಧನ ಮಂಜೂರು ಮಾಡಲು ₹5 ಸಾವಿರ ಲಂಚ ಕೇಳಿದ್ದ ಮುಶಿಗೇರಿ ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕ ಕಳಕಪ್ಪ ರಾಜೂರ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕರಾಟೆ ತರಬೇತುದಾರ ಆನಂದ ವಿರುಪಾಕ್ಷಪ್ಪ ವಾಲ್ಮೀಕಿ 8 ಮತ್ತು 9ನೇ ತರಗತಿ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಿದ್ದರು.ಗೌರವಧನ ₹9 ಸಾವಿರ ಮಂಜೂರು ಮಾಡಲು ಕೋರಿದ್ದರು. ಅದಕ್ಕಾಗಿ ಲಂಚ ಕೇಳಿದ್ದ ಕಳಕಪ್ಪ, ಸೋಮವಾರ ₹4 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

