ಇಲ್ಲಿನ ದಿವ್ಯಜ್ಯೋತಿ ಅಂಧ ಮಕ್ಕಳ ಶಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬಾಲ ನ್ಯಾಯ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ.ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ’ ಎಂದು ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

