ಬೆಂಗಳೂರು: ನಗರದ ಸಿಂಗಸಂದ್ರದಲ್ಲಿ ಬಿಎಂಟಿಸಿ ಬಸ್ ಟೈರ್ ಸ್ಫೋಟಗೊಂಡು ಓರ್ವ ಪ್ರಯಾಣಿಕ ಗಾಯಗೊಂಡ ಘಟನೆ ಡಿ.28ರ ಭಾನುವಾರ ಬೆಳಗ್ಗೆ ನಡೆದಿದೆ.ಅತ್ತಿಬೆಲೆಯಿಂದ ಮೆಜೆಸ್ಟಿಕ್ ಕಡೆಗೆ ಹೊರಟಿದ್ದ ಬಸ್ ಸಿಂಗಸಂದ್ರ ಬಳಿ ಸಾಗುವಾಗ ಏಕಾಏಕಿ ಟೈರ್ ಸ್ಫೋಟಗೊಂಡಿದೆ.ಸ್ಫೋಟದ ಪರಿಣಾಮ ಟೈರ್ ಸಮೀಪದ ಸೀಟ್ಗೆ ಹಾನಿಯಾಗಿದ್ದು, ಬಸ್ನ ಕೆಳಭಾಗ ಛಿದ್ರವಾಗಿ ಧೂಳು ತುಂಬಿಕೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದ್ದು, ಸ್ಫೋಟದ ಶಬ್ದದಿಂದ ಕೆಲಕಾಲ ಪ್ರಯಾಣಿಕರು ಆತಂಕಕ್ಕೊಳಗಾದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

