Breaking News

ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ

ನಗರದಲ್ಲಿ ಕೊಲೆ ಪ್ರಕರಣಗಳು ಮುಂದುವರೆದಿವೆ. ಕೌಟುಂಬಿಕ ಕಲಹದಿಂದಾಗಿ ಯುವಕನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರುವಂತ ಘಟನೆ ವಿನೋಬನಗರದಲ್ಲಿ ನಡೆದಿದೆ.ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆ ಬಳಿಯಲ್ಲಿ ಇಂದು ಸಂಜೆ ಕ್ಷುಲ್ಲಕ ಕಾರಣಕ್ಕಾಗಿ ಯುವನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರೋ ಘಟನೆ ನಡೆದಿದೆ.ಕೊಲೆಯಾದ ಯುವಕನನ್ನು ಅರುಣ್(26) ಎಂಬುದಾಗಿ ಗುರುತಿಸಲಾಗಿದೆ. ವೈವಾಹಿಕ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಈ ಗಲಾಟೆ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ಸಂಬಂಧಿಕರೇ ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಕೂಡಲೇ ಅಲರ್ಟ್ ಆದಂತ ಶಿವಮೊಗ್ಗ ಪೊಲೀಸರು, ಇಬ್ಬರನ್ನು ಪ್ರಕರಣ ಸಂಬಂಧ ಬಂಧಿಸಿರೋದಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *