ಪೊಲೀಸ್ ಇನ್ಸ್ಪೆಕ್ಟರ್ಗಳಿಗೆ ವಾಟ್ಸ್ಆಯಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪತ್ರಕರ್ತರೊಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಬಾಗಲೂರು ಠಾಣೆ ಸಬ್ ಇನ್ಸ್ಪೆಕ್ಟರ್ ರಮೇಶ್ ಅವರ ದೂರು ಆಧರಿಸಿ ಪತ್ರಕರ್ತ ಶರತ್ ಶರ್ಮಾ ಕಲಗಾರ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದಾರೆ.ಆರೋಪಿಯು ಬಾಗಲೂರು ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಶಬರೀಶ್ ಮತ್ತು ಸಬ್ ಇನ್ಸ್ಪೆಕ್ಟರ್ ರಮೇಶ್, ಕೊತ್ತನೂರು ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಚೇತನ್ ಕುಮಾರ್ ಮತ್ತು ಅವಲಹಳ್ಳಿಯ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ರಾಮಕೃಷ್ಣ ಅವರಿಗೆ ಕರೆ ಮಾಡಿ ತಲಾ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

