ಬ್ಯಾನರ್ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.ಈ ಬಗ್ಗೆ ಎಸ್ಪಿ ಸುಮನ್ ಡಿ.ಪನ್ನೇಕರ್ ಪ್ರತಿಕ್ರಿಯಿಸಿದ್ದು, ಸಮಾವೇಶದಲ್ಲಿ 15-20 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ. ಭದ್ರತೆಗಾಗಿ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಬ್ಬರು ಎಸ್ಪಿ, 7 ಹೆಚ್ಚವರಿ ಎಸ್ಪಿ, 15 ಡಿವೈಎಸ್ಪಿ, 55 ಸಿಪಿಐ, 122 ಪಿಎಸ್ಐ, 81 ಎಎಸ್ಐ, 1233 ಪೊಲೀಸ್ ಕಾನ್ಸ್ಟೇಬಲ್, 171 ಮಹಿಳಾ ಪೊಲೀಸ್ ಸಿಬ್ಬಂದಿ, 500 ಹೋಮ್ಗಾರ್ಡ್ ಸಿಬ್ಬಂದಿ, 12 ಡಿಎಆರ್ ತುಕಡಿ, 17 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಈಗಾಗಲೇ ಸಮಾವೇಶದ ಆಯೋಜಕರಿಂದ ಮಾಹಿತಿ ಪಡೆದಿದ್ದೇವೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

