Breaking News

ಆನ್ ಲೈನ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಬುದ್ಧಿವಾದ ಹೇಳಿದ ತಂದೆ: ಪದವಿ ವಿದ್ಯಾರ್ಥಿ ಆತ್ಮಹತ್ಯೆ

ಬಾಗಲಕೋಟೆ: ಬಿಸಿಎ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ ರಮೇಶ್ ಬಂಟನೂರು(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆನ್ ಲೈನ್ ಬೆಟ್ಟಿಂಗ್ ನಿಂದಾಗಿ ಲಕ್ಷಾಂತರ ರೂಪಾಯಿ ಹಣ ಸಲಾ ಮಾಡಿಕೊಂಡಿದ್ದ. ಮಗ ಮಾಡಿದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಅಲ್ಲದೇ ಮಗನಿಗೆ ಬೆಟ್ಟಿಂಗ್ ಆಡದಂತೆ ಬೈದು ಬುದ್ಧಿವಾದ ಹೇಳಿದ್ದರು. ಮತ್ತೆ ಆನ್ ಲೈನ್ ಬೆಟ್ಟಿಂಗ್ ಆಡದಂತೆ ತಾಕೀತು ಮಾಡಿದ್ದರು. ತಂದೆ ಬೈದು ಬುದ್ಧಿ ಹೇಳಿದ್ದಕ್ಕೆ ನೊಂದ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *