Breaking News

ಒಂಟಿ ಮಹಿಳೆಯನ್ನು ಹತ್ಯೆಗೈದು ಹೃದಯಾಘಾತವೆಂದು ನಾಟಕವಾಡಿದ್ದ ಆರೋಪಿ ಅರೆಸ್ಟ್

ಬಾಗಲಕೋಟೆ: ಒಂಟಿ ಮಹಿಳೆ ಶವವಾಗಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಹೃದಯಾಗಾತ ಎಂದು ಆಸ್ಪತ್ರೆಗೆ ಸೇರಿಸುವ ನಾಟಕವಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೇ ಮಹಿಳೆಯನ್ನು ಹತ್ಯೆಗೈದು, ಹೃದಯಾಘಾತ ಎಂದು ನಾಟಕವಾಡಿದ್ದ. ಆಸ್ಪತ್ರೆಗೆ ಸೇರಿಸಲು ಯತ್ನಿಸಿದ್ದ. ಅನುಮಾನಗೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನೇ ಕೊಲೆಗೈದಿದ್ದಾಗಿ ಬಾಯ್ಬಿಟ್ಟಿದ್ದಾನೆ. ಯಮನವ್ವ ಕೊಲೆಯಾದ ಮಹಿಳೆ. ಶ್ರೀಶೈಲ ಪಾಟೀಲ್ ಬಂಧಿತ ಆರೋಪಿ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *