Breaking News

ಜಮ್ಮು-ಕಾಶ್ಮೀರಾದಲ್ಲಿ ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಪ್ರದೇಶದ ಬಳಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ಸಿಕ್ಕಿತ್ತು.ಭಾರತೀಯ ಸೇನೆಯ 16 ಕಾರ್ಪ್ಸ್ ಪ್ರಕಾರ, ಈ ಪ್ರದೇಶದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲು ಪಡೆಗಳು ‘ಆಪರೇಷನ್ ಟ್ರಾಶಿ-I’ ಎಂಬ ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. “ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ನಡೆಯುತ್ತಿರುವ ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಭಾಗವಾಗಿ ನಡೆಸಲಾದ ಉದ್ದೇಶಪೂರ್ವಕ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಚತ್ರೂವಿನ ಈಶಾನ್ಯದಲ್ಲಿರುವ ಸೋನ್ ನಾರ್ ಸಾಮಾನ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕವನ್ನ ಸ್ಥಾಪಿಸಲಾಯಿತು” ಎಂದು ಅದು ಹೇಳಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *