Breaking News

ರಸ್ತೆ ಬದಿ ಕುಳಿತು ಊಟ ಮಾಡುತ್ತಿದ್ದವರ ಮೇಲೆ ಹರಿದ ಕಾರು: 2 ಬಲಿ

ಇಂದೋರ್: ರಸ್ತೆ ಬದಿಯಲ್ಲಿ ಊಟ ಮಾಡುತ್ತಿದ್ದ ಕಾರ್ಮಿಕರ ಗುಂಪಿನ ಮೇಲೆ ಕಾರು ಹರಿದ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಸಿಗ್ಮಾ ಕಾಲೋನಿ ಎಂಬಲ್ಲಿ ರಸ್ತೆ ವಿಭಜಕದ ರೇಲಿಂಗ್‌ಗಳನ್ನು ಅಳವಡಿಸುವ ಕೆಲಸದಲ್ಲಿ 13 ಮಂದಿ ಕಾರ್ಮಿಕರು ತೊಡಗಿದ್ದರು.ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಕಾರ್ಮಿಕರ ಮೇಲೆ ಹರಿದಿದೆ. ತಲೆಮರೆಸಿಕೊಂಡಿರುವ ಕಾರು ಚಾಲಕನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಪಘಾತಕ್ಕೀಡಾದ ಕಾರಿಗೆ ನಂಬರ್‌ ಪ್ಲೇಟ್‌ ಇರಲಿಲ್ಲ. ಕಾರ್ಮಿಕರೆಲ್ಲರೂ ಮಂಡ್ಲಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *