Breaking News

ಉಡುಪಿ | ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಉಪ್ಪೂರು ಕೆ.‌ಜಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು ಚಕ್ರದಡಿ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ.ಮೃತ ಸವಾರ‌ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಬ್ರಹ್ಮಾವರ ಆರಕ್ಷಕ ಠಾಣೆಯ‌ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು. ಶವತೆರವು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು,‌ ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *