Breaking News

ಅರಣ್ಯಾಧಿಕಾರಿಗೆ ಜೀವಬೆದರಿಕೆ ಹಾಕಿದವನಿಗೆ 3 ತಿಂಗಳ ಶಿಕ್ಷೆ

ಮುಂಡಗೋಡ: ಉಪವಲಯ ಅರಣ್ಯಾಧಿಕಾರಿ ಯಲ್ಲಾನಾಯಕ ಹಮಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಾಲ್ಲೂಕಿನ ಅಜ್ಜಳ್ಳಿ ಗ್ರಾಮದ ಚಂದ್ರಶೇಖರ ಹರಿಜನ ಅವರಿಗೆ ಮೂರು ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ, ಜೆಎಂಎಫ್‌ಸಿ ನ್ಯಾಯಾಧೀಶೆ ಅಕ್ಷತಾ ಸಿ.ಆರ್‌.ಶನಿವಾರ ಆದೇಶ ನೀಡಿದ್ದಾರೆ. ತನ್ನ ಅಣ್ಣನ ಮೇಲೆ ಅರಣ್ಯ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆಂದು ಕುಪಿತಗೊಂಡ ಚಂದ್ರಶೇಖರ ಅವರು ಯಲ್ಲಾನಾಯಕ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು 2019ರಲ್ಲಿ ಪ್ರಕರಣ ದಾಖಲಾಗಿತ್ತು. ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರಸಾದ ರಮೇಶ ಹೆಗಡೆ ವಾದ ಮಂಡಿಸಿದ್ದರು

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *