Breaking News

ಈಜುಕೊಳದಲ್ಲಿ ಶವವಾಗಿ ಪತ್ತೆಯಾದ ಮಹಿಳೆ: ಪತಿಯಿಂದಲೇ ಕೊಲೆ ಶಂಕೆ

ರಾಮನಗರ: ಈಜುಕೊಳದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಪ್ರತಿಭಾ ಮೃತ ಮಹಿಳೆ. ಪ್ರತಿಭಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು. ಪತ್ರಿಭಾ ಬಾಬುಗೆ ಎರಡನೇ ಹೆಂಡತಿ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಪತಿ-ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಪತಿ ಬಾಬು ಹತ್ಯೆ ಮಡಿದ್ದಾನೆ ಎಂದು ಪ್ರತಿಭಾ ಪೋಷೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರತಿಭಾ ಪೋಷಕರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *