ಚಾಮರಾಜನಗರ: ಸಂಚಾರ ಠಾಣೆಯಲ್ಲಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಸವಾರನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ಸ್ಟೆಬಲ್ ಮಲ್ಲು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂಚಾರ ಠಾಣೆಯಲ್ಲಿ ಇರಿಸಿಕೊಳ್ಳಲಾಗಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಮಾಲೀಕರಿಗೆ ₹ 3,000ಕ್ಕೆ ಬೇಡಿಕೆ ಇರಿಸಲಾಗಿತ್ತು.ಈ ಸಂಬಂಧ ದೂರುದಾರ ಹರದನಹಳ್ಳಿಯ ಪ್ರತಾಪ್ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಸಂಜೆ ದೂರುದಾರ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ಹೆಡ್ ಕಾನ್ಸ್ಟೆಬಲ್ನನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

