ಬೆಳಗಾವಿ ಜಿಲ್ಲೆ: ಪಟ್ಟಣದ ತಹಶೀಲ್ದಾರ್ ಕಚೇರಿಯ ಎಸ್ಡಿಎ ಚಂದ್ರಶೇಖರ ಮುರಟಗಿ ₹80 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ‘ಭೂ ದಾಖಲೆ ಸಂಬಂಧಿಸಿದ ಕೆಲಸಕ್ಕೆ ₹ 1 ಲಕ್ಷ ನೀಡುವಂತೆ ರೈತ ಶಿವಾನಂದ ದುಂಡಗಿ ಅವರಿಗೆ ಆರೋಪಿಯು ಬೇಡಿಕೆ ಇಟ್ಟಿದ್ದರು. ₹80 ಸಾವಿರ ಲಂಚ ಪಡೆಯುವಾಗ ಕಾರ್ಯಾಚರಣೆ ನಡೆಸಿ, ಬಂಧಿಸಿದೆವು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ದಾಳಿ ವೇಳೆ ಕಚೇರಿಯ ಕೆಲ ದಾಖಲೆಗಳನ್ನು ಪರಿಶೀಲಿಸಿದ್ದು, ಮ್ಯೂಟೇಷನ್, ಪಹಣಿ ತಿದ್ದುಪಡಿ ಸೇರಿ ಕಂದಾಯಕ್ಕೆ ಸಂಬಂಧಿಸಿದ ಕಡತಗಳನ್ನು ವಶಕ್ಕೆ ಪಡೆದುಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

