Breaking News

ದೊಡ್ಡಬಳ್ಳಾಪುರ: ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕನಿಂದ ಗಲಾಟೆ

ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿರುವ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳಗ್ಗೆ ಸುಪ್ರಭಾತ ಹಾಡು ಹಾಕಲಾಗಿತ್ತು. ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡಿ, ಇಲ್ಲವೆ ಆಫ್ ಮಾಡಿ ಎಂದು ಧಮ್ಕಿ ಹಾಕಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದರು. ಇದೇ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರು NCR ದಾಖಲಿಸಿದ್ದು ಎರಡು ಕಡೆಯವರಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *