Breaking News

ವಿದ್ಯುತ್‌ ಸ್ಪರ್ಶಿಸಿ ಕಬ್ಬಿನ ಲಾರಿ ಭಸ್ಮ

ಮಂಡ್ಯ: ಲಾರಿಯಲ್ಲಿ ಕಬ್ಬಿನ ತರಗು ತುಂಬಿಕೊಂಡು ಬರುತ್ತಿದ್ದಾಗ ವಿದ್ಯುತ್‌ ತಂತಿ ಸ್ಪರ್ಶಿಸಿ, ಸುಟ್ಟು ಹೋಗಿರುವ ಘಟನೆ ತಾಲ್ಲೂಕಿನ ದೊಡ್ಡಬಾಣಸವಾಡಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಸದ್ಯಕ್ಕೆ ಲಾರಿ ಚಾಲಕ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿಯು ಕೆರಗೋಡು ಮುಖ್ಯ ರಸ್ತೆಯಲ್ಲಿ ಮಂಡ್ಯ ಕಡೆಗೆ ಬರುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ತಂತಿ ಸ್ಪರ್ಶವಾಗಿದೆ. ಇದರ ಪರಿಣಾಮ ಲಾರಿ ಹಾಗೂ ಕಬ್ಬಿನ ತರಗು ಸಂಪೂರ್ಣವಾಗಿ ಸುಟ್ಟುಹೋಗಿದೆ. ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುವಷ್ಟರಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟರಲ್ಲಿ ಬಹುತೇಕ ಲಾರಿಭಾಗ ಸುಟ್ಟುಕರಕಲಾಗಿದೆ. ಸ್ಥಳಕ್ಕೆ ಕೆರಗೋಡು ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಕಾಶಿನಾಥ್‌ ಬಗಲಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *