ಚಿತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಟೆಕ್ಕಿಯೋರ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಈ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

