ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಮಿಟಗಾನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ಅನುಮಾನ ಹಿನ್ನೆಲೆ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೊಂದಿಗೆ ಮಾವನಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ಅಳಿಯನೇ ಮಾವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.ಮೃತ ವ್ಯಕ್ತಿಯನ್ನು ನಯಾಜ್ ಖಾನ್ (38) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಶಾಹಿದ್ ಖಾನ್ (33) ಎಂದು ಪೊಲೀಸರು ಗುರುತಿಸಿದ್ದಾರೆ. ಶಾಹಿದ್ ಖಾನ್, ಮೃತ ನಯಾಜ್ ಖಾನ್ ಅವರ ಸಹೋದರಿಯ ಪುತ್ರನಾಗಿದ್ದು, ಇಬ್ಬರೂ ಮಾವ-ಅಳಿಯ ಸಂಬಂಧ ಹೊಂದಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಶಾಹಿದ್ ಖಾನ್ ತನ್ನ ಪತ್ನಿಯೊಂದಿಗೆ ನಯಾಜ್ ಖಾನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಕಳೆದ ಕೆಲವು ದಿನಗಳಿಂದ ಆತಂಕದಲ್ಲಿದ್ದನು. ಈ ವಿಷಯಕ್ಕೆ ಸಂಬಂಧಿಸಿ ಕುಟುಂಬದೊಳಗೆ ಈಗಾಗಲೇ ಅಸಮಾಧಾನ ಹಾಗೂ ವಾಗ್ವಾದಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

