ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಾಕೊಲೇಟ್ ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ಆನೇಕಲ್ ಪೊಲೀಸ್ ಅಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದೇ 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಸಿದ ಆರೋಪ ಕೇಳಿ ಬಂದಿದೆ. ಹೌದು 9 ವಿದ್ಯಾರ್ಥಿಗಳಿಗೆಗಳ ಜೊತೆಗೆ ಅಸಭ್ಯವಾಗಿ ವರ್ತನೆ ಆರೋಪ ಕೇಳಿ ಬಂದಿದ್ದು, ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಕೃತ್ಯದ ಬಗ್ಗೆ ಪೋಷಕರ ಬಳಿ ಮಕ್ಕಳು ಎಲ್ಲ ವಿಚಾರ ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ಆರೋಪಿ ಕೃಷ್ಣ ಮೂರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

