Breaking News

ದಾವಣಗೆರೆಯಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್!

ದಾವಣಗೆರೆ : ಅಗ್ನಿ ಅವಘಡಕ್ಕೆ ಬೆಣ್ಣೆ ದೋಸೆ ಹೋಟೆಲ್ ಸುಟ್ಟು ಭಸ್ಮವಾಗಿದೆ. ಪ್ರಸಿದ್ದ ಶ್ರೀ ಕೊಟ್ಟೂರೇಶ್ವರ ಹೋಟೆಲ್, ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದೆ. ದಾವಣಗೆರೆಯ ಡೆಂಟಲ್ ಕಾಲೇಜು ಬಳಿ ಈ ಒಂದು ಘಟನೆ ನಡೆದಿದೆ. ಹೋಟೆಲ್ ಕ್ಲೋಸ್ ಆಗಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಹೋಟೆಲ್ ನಲ್ಲಿ ಇದ್ದಂತಹ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿವೆ. ದಾವಣಗೆರೆ ನಗರದಲ್ಲಿರುವ ಅತ್ಯಂತ ಹಳೆಯ ಹೋಟೆಲ್ ಎಂದು ಪ್ರಸಿದ್ಧವಾಗಿದ್ದು, ಕೊಟ್ಟೂರೇಶ್ವರ ಹೋಟೆಲ್ ಇದೀಗ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *