Breaking News

ನಾಗಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಕಾರು ಅಪಘಾತ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

ಮಂಡ್ಯ: ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ಗೌಡ ಪ್ರಯಾಣಿಸುತ್ತಿದ್ದ ಕಾರು ಬಸರಾಳು ಗ್ರಾಮದ ಸಮೀಪ ಭೀಕರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸುರೇಶ್‌ಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಮದುವೆ ಸಮಾರಂಭವೊಂದನ್ನು ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದೆ. ಸುರೇಶ್‌ಗೌಡ ಅವರ ಕೈ ಬೆರಳುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕಾರಿನಲ್ಲಿದ್ದ ಚಾಲಕ ಶೇಖರ್‌, ಬಿಂಡಿನಹಳ್ಳಿ ಪ್ರಸನ್ನ, ಗನ್‌ಮ್ಯಾನ್​ಗೂ ಸಹ ಗಂಭೀರ ಗಾಯಗಳಾಗಿವೆ. ಸದ್ಯ ಮಾಜಿ ಶಾಸಕ ಸುರೇಶ್​ಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಪಟ್ಟಂತೆ ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *