Breaking News

ಸ್ಮಶಾನದಿಂದ ಹಾರಿ ಬಂದ ಬೆಂಕಿ ಕಿಡಿ: 25 ಬೈಕ್‌, ಕಾರು ಕರಕಲು

ಬೆಂಗಳೂರು: ಪೊಲೀಸರು ಜಪ್ತಿ ಮಾಡಿ ನಿಲ್ಲಿಸಿದ್ದ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 25ಕ್ಕೂ ಅಧಿಕ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್‌ ಠಾಣೆ ಸಮೀಪ ನಡೆದಿದೆ. ಬಾಣಸವಾಡಿ ಪೊಲೀಸರು ಜಪ್ತಿ ಮಾಡಿದಂತಹ ವಾಹನಗಳನ್ನು ಠಾಣೆ ಸಮೀಪದಲ್ಲಿ ನಿಲ್ಲಿಸಿದ್ದರು. ಠಾಣೆ ಪಕ್ಕದಲ್ಲಿಯೇ ಶ್ಮಶಾನವಿದ್ದು, ಅದರಿಂದ ಹಾರಿದ ಕಿಡಿ ವಾಹನಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುತ್ತಿದಂತೆ ಧಗ ಧಗನೆ ಉರಿದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಕೆಲವೊಂದು ವಾಹನಗಳನ್ನು ಪಕ್ಕಕ್ಕೆ ಸರಿಸಿದ್ದಾರೆ. ವಿಷಯ ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿದ್ದಾರೆ. ಘಟನೆಯಲ್ಲಿ ಬೈಕ್‌ ಮತ್ತು ಕಾರು ಸೇರಿದಂತೆ 25ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಾಣಸವಾಡಿಯಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *