Breaking News

ಕರ್ನಾಟಕ ಲೋಕಾಯುಕ್ತ ದಾಳಿ ಶಹರ ಠಾಣೆಯ ASI ಲಾಕ್..

ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ…

ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಸಿ.ವಿ. ಇಂಗಳಹಳ್ಳಿ ₹10,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ…

ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದರ ಅವರ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ, ಒಟ್ಟು ₹13,000ಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು ₹10,000 ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ…

ವೀರೇಶ ಪೂಜಾರ ಅವರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ…

ಈ ಘಟನೆ ಬಳಿಕ ಸಾರ್ವಜನಿಕ ವಲಯದಲ್ಲಿ ಭಾಗದಲ್ಲಿಯೂ, ವಿಶೇಷವಾಗಿ ಟ್ರಾಫಿಕ್ ಪೊಲೀಸರ ಕಾರ್ಯವೈಖರಿಯ ಬಗ್ಗೆ ಲೋಕಾಯುಕ್ತ ಇಲಾಖೆ ಪರಿಶೀಲನೆ ನಡೆಸಬೇಕು” ಎಂಬ ಆಗ್ರಹ ಕೇಳಿಬರುತ್ತಿದೆ…

ಭ್ರಷ್ಟಾಚಾರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ…

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *