ಬಳ್ಳಾರಿ: ನಗರದ ಬೆಂಗಳೂರು ರಸ್ತೆಯಲ್ಲಿರುವ ಖಬರಸ್ತಾನ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪಾಲಿಕೆಯು ತನ್ನ ಅಧಿಕಾರಿಗಳನ್ನು ಅಮಾನತು ಮಾಡಿದೆ. ಪಾಲಿಕೆ ವಿಷಯ ನಿರ್ವಾಹಕ ಶ್ರೀಕಾಂತ್, ಕಂದಾಯ ನಿರೀಕ್ಷರಾದ ಮನೋಹರ್, ನರೇಶ್ ಕುಮಾರ್, ಸಹಾಯಕ ಕಂದಾಯ ಅಧಿಕಾರಿ ವೆಂಕಟೇಶ್ವರಲು, ಕಂದಾಯ ಅಧಿಕಾರಿ ನಾರಾಯಣ, ಮುಖ್ಯ ಕಚೇರಿಯ ಡೇಟಾ ಎಂಟ್ರಿ ಆಪರೇಟರ್ ಸ್ನೇಹಾ ಅಮಾನತುಗೊಂಡವರು. ಇವರ ವಿರುದ್ಧ ಬ್ರೂಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

