ಕಾರವಾರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ವಿರುದ್ಧ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೊನ್ನಾವರ ತಾಲೂಕಿನ ಮೊಳ್ಕೋಡಿನ ಶ್ರೀರಾಮ ಮಂದಿರ ಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮದಲ್ಲಿ ಸೀತಾರಾಮ ಕಲ್ಯಾಣೋತ್ಸವ ಸಭಾಭವನದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ರಾಮಪ್ಪ ವಿರುದ್ಧ ಸಾಗರದ ರಾಜೇಂದ್ರ ಪ್ರಸಾದ್ ದೂರು ನೀಡಿದ್ದಾರೆ. ಜನವರಿ 31ರ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಮಪ್ಪ ಬ್ರಾಹ್ಮಣರನ್ನು ನಿಂದಿಸಿದ್ದರು. ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶ ಕಾರಣವಾಗಿತ್ತು. ಸಾಗರದಲ್ಲಿ ರಾಜೇಂದ್ರ ಪ್ರಸಾದ್ ಮೊದಲು ದೂರು ದಾಖಲಿಸಿದ್ದು, ಪ್ರಕರಣವನ್ನು ಹೊನ್ನಾವರಕ್ಕೆ ವರ್ಗಾವಣೆ ಮಾಡಿ ಪ್ರಕರಣ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

