ಹಾವೇರಿ: ಫೋನ್ ಪೇ ಮೂಲಕ ಲಂಚ ಪಡೆದ ಆಹಾರ ನಿರೀಕ್ಷಕ(ಪ್ರಭಾರ)ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪಡಿತರ ಚೀಟಿ ಮಾಡಿಸಿಕೊಟ್ಟಿದ್ದಕ್ಕೆ 5000 ರೂ. ಲಂಚ ಪಡೆದ ಆರೋಪದ ಮೇಲೆ ಆಹಾರ ನಿರೀಕ್ಷಕ ವಿಜಯಕುಮಾರ ಗುಡಗೇರಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹಿರೇಲಿಂಗದಹಳ್ಳಿಯ ಬೀರಪ್ಪ ಕಾಶಂಬಿ ಅವರಿಗೆ ವಿಜಯಕುಮಾರ ಪಡಿತರ ಚೀಟಿ ಮಾಡಿಕೊಟ್ಟಿದ್ದರು. ಇದಕ್ಕಾಗಿ ಅವರು ಫೋನ್ ಪೇ ಮೂಲಕ ಲಂಚ ಪಡೆದುಕೊಂಡಿದ್ದರು. ಈ ಬಗ್ಗೆ ದೂರು ಪಡೆದ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ವಿಜಯಕುಮಾರ ಅವರನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

