ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿಮುಟ್ಟಿಸಿದ್ದು, ಬೆಂಗಳೂರಿನ ನಾಲ್ಕು ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದೆ. ಕೆಆರ್ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ ನಾಯಕ್, ಬಿಡಿಎ ವ್ಯಾಪ್ತಿಯ ಆರ್ಎಫ್ಓ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಓ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, ಮಂಡ್ಯದ ಲೋಕೋಪಯೋಗಿ ಇಲಾಖೆಯ ಮಂಡ್ಯ ಉಪವಿಭಾಗದ ಎಎಇ ಎಸ್ ಸತೀಶ್, ಧಾರವಾಡದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾ ಎಂ.ಕೆ.ಸುರಕೋಡ, ಹಾಸನ ಮಹಾನಗರ ಪಾಲಿಕೆಯ ಎಎಇ ಎಂ.ಸಿ ಸತ್ಯನಾರಾಯಣ, ಮೈಸೂರಿನ, ಜಲ ಭವನದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಎಇ ಮತ್ತು ಇಇ ಆಸಿಫ್ ಇಕ್ಬಾಲ್ ಹಾಗೂ ವಿಜಯಪುರದ ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಕಿರಿಯ ಇಂಜಿನಿಯರ್ ಆಗಿರುವ ಪ್ರಕಾಶ್ ಪಿ.ಜಿ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

