Breaking News

ಆನೇಕಲ್: ಸ್ಪ್ರೇ ಹೊಡೆದು ಯುವಕನ ಅಪಹರಣ

ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ಪೂರು ಬಳಿ ಭಾನುವಾರ ಕಾರನ್ನು ಅಡ್ಡಗಟ್ಟಿ ಯುವಕನೊಬ್ಬನನ್ನು ಅಪಹರಣ ಮಾಡಲಾಗಿದೆ. ಹೊನ್ನಕಳಶಾಪುರ ಗೋಪಾಲ್ ಅಪಹರಣ ಆದವರು. ಗೋಪಾಲ್ ಮತ್ತು ಅವರ ಸ್ನೇಹಿತ ಸತೀಶ್ ಅತ್ತಿಬೆಲೆಯಿಂದ ಆನೇಕಲ್‌ನತ್ತ ಬರುವಾಗ ಕರ್ಪೂರ ಬಳಿ ಕಾರಿಗೆ ದುಷ್ಕರ್ಮಿಗಳು ತಮ್ಮ ವಾಹನದಿಂದ ಡಿಕ್ಕಿ ಹೊಡೆದು ಗೋಪಾಲ್ ಮುಖಕ್ಕೆ ಸ್ಪ್ರೇ ಹಾಕಿ ಅಪಹರಣ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಗೋಪಾಲ್ ರಿಯಲ್ ಎಸ್ಟೇಟ್ ಮತ್ತು ಹಣಕಾಸು ವ್ಯವಹಾರ ಮಾಡುತ್ತಿದ್ದ ಎನ್ನಲಾಗಿದ್ದು, ಅಪಹರಣಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಯ ಹಿನ್ನೆಲೆಯಲ್ಲಿ ಕರ್ಪೂರ ಬಳಿ ಇದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *