Breaking News

ದಾವಣಗೆರೆ | ಖೋಟಾ ನೋಟು ಚಲಾವಣೆ; 5 ವರ್ಷ ಜೈಲು ಶಿಕ್ಷೆ

ಖೋಟಾ ನೋಟು ಮುದ್ರಿಸಿ, ಚಲಾವಣೆ ಮಾಡುತ್ತಿದ್ದ ಇಬ್ಬರು ಅಪರಾಧಿಗಳಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹ 40,000 ದಂಡ ವಿಧಿಸಿದೆ. ದಾವಣಗೆರೆಯ ಯಲ್ಲಮ್ಮ ನಗರದ ನಿವಾಸಿ ಎಸ್. ಅಶೋಕ (40) ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಗ್ರಾಮದ ನಿವಾಸಿ ಹಾಲೇಶ ಶಿಕ್ಷೆಗೆ ಗುರಿಯಾದವರು. 2022ರಲ್ಲಿ ಯಲ್ಲಮ್ಮ ನಗರದಲ್ಲಿ ಅಪರಾಧಿಗಳು ಖೋಟಾ ನೋಟು ಚಲಾವಣೆಯಲ್ಲಿ ತೊಡಗಿದ್ದರು. ಪೊಲೀಸರು ದಾಳಿ ನಡೆಸಿ ಖೋಟಾ ನೋಟು ಹಾಗೂ ಅವುಗಳ ತಯಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರವೀಣಕುಮಾರ್ ಆರ್.ಎನ್. ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಅಪರಾಧಿಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವುದರಿಂದ ಶಿಕ್ಷಾ ಅವಧಿಯನ್ನು ಸೆಟ್‌ಆಫ್ ಮಾಡಲಾಗಿದೆ. ತನಿಖಾಧಿಕಾರಿ ಮಂಜುನಾಥ್ ಬಿ. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಕೀಲ ಜಯಪ್ಪ ಕೆ. ವಾದ ಮಂಡಿಸಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *