Breaking News

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಲ್ಪೆ: ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉಪ್ಪೂರು ಗ್ರಾಮದ ಲಕ್ಷ್ಮೀನಗರದ ಕಿಶೋರ್‌ (24) ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ದ ಬ್ರಹ್ಮಾವರ, ಕುಂದಾಪುರ, ಉಡುಪಿ ಪೊಲೀಸ್‌ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದವು. ವಾರೆಂಟ್‌ ಸಿಬಂದಿಯಾಗಿರುವ ಹೆಡ್‌ ಕಾನ್‌ಸ್ಟೆಬಲ್‌ ಸುರೇಶ್‌ ಕುಮಾರ್‌, ಆದರ್ಶ, ತನಿಖಾಧಿಕಾರಿ ಹುಸೇನ್‌ ಸಾಬ್‌ ಅವರ ತಂಡ ಮಾ. 11ರಂದು ಬ್ರಹ್ಮಾವರ ಕೊಳಲಗಿರಿಯ ಲಕ್ಷ್ಮೀನಗರದಲ್ಲಿ ಬಂಧಿಸಿದೆ. ಆರೋಪಿಗೆ ಮಾ. 26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *