ಆನಂದಪುರ: ತಾಳಗುಪ್ಪದಿಂದ ಮೈಸೂರಿಗೆ ತೆರುಳುತ್ತಿದ್ದ ಮೈಸೂರ್ ಇಂಟರ್ ಸಿಟಿ ರೈಲಿಗೆ ಆನಂದಪುರ ಸಮೀಪ ನವ ಟೂರ್ ಬಳಿ ಓರ್ವ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.14ರ ಶನಿವಾರ ಮಧ್ಯಾಹ್ನ ನಡೆದಿದೆ. ನವಟೂರ್ ಗ್ರಾಮದ ಭದ್ರಾಚಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಇಂಟರ್ ಸಿಟಿ ರೈಲು 3.30ರ ಸುಮಾರಿಗೆ ಮೈಸೂರು ಕಡೆಗೆ ಚಲಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಈ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

