ಪಡುಬಿದ್ರಿ: ಎರಡು ವರ್ಷಗಳ ಹಿಂದೆ ಕೊಟ್ಟ ಸಾಲದ ಹಣವನ್ನು ವಾಪಸ್ ಕೇಳಿದ್ದಕ್ಕಾಗಿ ಹೆಜಮಾಡಿ ಗುಂಡಿ ನಿವಾಸಿ ಧೀರಜ್ ಎಂಬವರು ಬಜಗೋಳಿಯ ಸುಮಿತ್ ಎಸ್. ಸುವರ್ಣ(29) ಎಂಬವರಿಗೆ ಹೆಜಮಾಡಿಯ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸುಮಿತ್ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಧೀರಜ್ನನ್ನು ಪಡುಬಿದ್ರಿ ಪೊಲೀಸರು ಮಣಿಪಾಲದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

