Breaking News

ಮನೆ ಮುಂದೆ ಕೆಲಸ ಮಾಡೋವಾಗ ಓಡಿ ಬಂದ ಕಳ್ಳರು, ಗೋಲ್ಡ್‌ ಕದ್ದು ಎಸ್ಕೇಪ್‌

ಮಂಡ್ಯ : ಮನೆಯ ಆವರಣದಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಮಳವಳ್ಳಿ ತಾಲೂಕಿನ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತ ಅವರ ಮೇಲೆ ಮಾ. 15 ರಂದು ಭಾನುವಾರ ರಾತ್ರಿ 9 ರ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಇಬ್ಬರು ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು ತೋರಿಸಿ ಬಲ ಕಿವಿಯಲ್ಲಿ ಧರಿಸಿದ್ದ 3 ಗ್ರಾಂ ತೂಕದ ಚಿನ್ನದ ಅಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *