ರಾಯಚೂರು ಜಿಲ್ಲೆಯ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದ ಬಳಿ ಕೆಕೆಆರ್ಟಿಸಿ (KKRTC) ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಈ ಘಟನೆ ನಡೆದಿದ್ದು, ಬಸ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತರನ್ನು ದೊಡ್ಡ ಈರಮ್ಮ (38) ಎಂದು ಗುರುತಿಸಲಾಗಿದೆ. ಕೊಪ್ಪಳ ಜಿಲ್ಲೆಯ ಬೆವಿನಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಂಧನೂರು ಬಸ್ ನಿಲ್ದಾಣದ ಎಂಟ್ರೆನ್ಸ್ ಗೇಟ್ ಬಳಿ ದುರಂತ ಸಂಭವಿಸಿದೆ. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ನಿಲ್ದಾಣದಲ್ಲೇ ನಡೆದ ಈ ಭೀಕರ ಅಪಘಾತ ಅಲ್ಲಿನ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

