ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಮೀಪದ ಬಸರಿಹಾಳ ಗ್ರಾಮದ ಯುವಕ ಕುಮಾರಸ್ವಾಮಿ(22) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಸರಿಹಾಳ ಗ್ರಾಮದ ಬಾಲಕಿಯನ್ನು ಆರೋಪಿ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡಿ ಪರಿಸರಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪಿಐ ವಿ.ನಾರಾಯಣ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

