ಚಿಕ್ಕಬಳ್ಳಾಪುರ: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಚಿಂತಾಮಣಿಯ ಕೆಜಿಎನ್ ಬಡಾವಣೆಯ ಲಕ್ಷ್ಮಿದೇವಮ್ಮ(60) ಮೃತ ಮಹಿಳೆ. ಕಿಡಿಗೇಡಿಗಳು ಮಹಿಳೆ ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಕೊಲೆ ಯತ್ನಿಸಿದ್ದರು. ಈ ಹಿನ್ನೆಲೆ ಮಹಿಳೆ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆದರೆ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಮೃತ ಮಹಿಳೆಯ ಮಗ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮಗನಿಂದಲೇ ಕೃತ್ಯ ನಡೆದಿರುವ ಶಂಕೆ ಕೂಡ ಇದೀಗ ವ್ಯಕ್ತವಾಗಿದೆ.ಈ ಘಟನಾ ಸಂಬಂಧ ಚಿಂತಾಮಣಿ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

