Breaking News

ಜೂಜಾಡಲು ಪತ್ನಿ ಹಣ ನೀಡಲಿಲ್ಲವೆಂದು ಪತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಜೂಜಾಡಲು ಪತ್ನಿ ಹಣ ಕೊಡದ ಹಿನ್ನೆಲೆಯಲ್ಲಿ ಬೇಸರಗೊಂಡ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಲ್ಲಿನ ಎಚ್​ಎಸ್​ ಗಾರ್ಡ್​ನ್​ನಲ್ಲಿರುವ ಕಿಶೋರ್​ (38) ಮೃತ. ಜೂಜಾಡಲು ಹಣ ಕೇಳಿದಾಗ ಪತ್ನಿ ನಿರಾಕರಿಸಿದ್ದಾಳೆ. ಈ ವೇಳೆ ಕಿಶೋರ್​ ಹಣ ಕೊಡದಿದ್ದರೆ ಆತ್ಮಹತ್ಯೆ ಶರಣಾಗುವುದಾಗಿ ಬೆದರಿಸಿದ್ದಾನೆ. ಆದರೆ, ಅದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಬೇಸರಗೊಂಡು ವಿಷ ಸೇವಿಸಿದ್ದಾನೆ. ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *