Breaking News

ಮಾರಣಾಂತಿಕ ಕಾಯಿಲೆಯಿಂದ 15 ಹಸು ಸಾವು: ಸಾಲಬಾಧೆಯಿಂದ ದುಡುಕಿನ ನಿರ್ಧಾರ ಕೈಗೊಂಡ ರೈತ ಆತ್ಮಹತ್ಯೆ

ತುಮಕೂರು: ಹೈನುಗಾರಿಕೆಯಲ್ಲಿ ನಷ್ಟ ಉಂಟಾಗಿ ವಿಪರೀತ ಸಾಲ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಟಗೆರೆ ತಾಲೂಕಿನ ಜೋನಿಗರಹಳ್ಳಿಯಲ್ಲಿ ನಡೆದಿದೆ. ರಮೇಶ್(49) ಆತ್ಮಹತ್ಯೆ ಮಾಡಿಕೊಂಡವರು. ಕೃಷಿಯೊಂದಿಗೆ ಹೈನುಗಾರಿಕೆ ಮಾಡಲು ಮೈಕ್ರೋ ಫೈನಾನ್ಸ್ ಸೇರಿದಂತೆ ವಿವಿಧೆಡೆ ಸುಮಾರು 8 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಮೂರ್ನಾಲ್ಕು ವರ್ಷಗಳಿಂದ ಪತ್ನಿ ಹಾಗೂ ತಮ್ಮ ಹೆಸರಲ್ಲಿ ಅವರು ಸಾಲ ಪಡೆದು 20 ಹಸುಗಳನ್ನು ಸಾಕುತ್ತಿದ್ದರು. ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ರಮೇಶ್ ಅವರಿಗೆ ಸೇರಿದ 15 ಹಸುಗಳು ಮಾರಣಾಂತಿಕ ಕಾಯಿಲೆ ಮತ್ತು ರೋಗಗಳ ಕಾರಣ ಸಾವನಪ್ಪಿವೆ. ಇದರ ಪರಿಣಾಮ ಸಾಲದ ಕಂತುಗಳನ್ನು ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋನಿಗರಹಳ್ಳಿ ಗ್ರಾಮದ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *