ಕೋಟ: ಬಿಲ್ಲಾಡಿ ಗ್ರಾಮದ ಅರ್ಭಕದಾರಕೇಶ್ವರ ದೇವಸ್ಥಾನದ ಎದುರು ಮಾ.25ರಂದು ಬೆಳಗ್ಗೆ ಪರಸ್ಪರ ಮೈ ಕೈ ಮೇಲಾಯಿಸಿ ಗಲಾಟೆ ಮಾಡುತ್ತಿದ್ದ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಣೇಶ ಶೆಟ್ಟಿ , ಭಾಸ್ಕರ ಹೆಗ್ಡೆ , ಚಂದ್ರ ಶೆಟ್ಟಿ, ಅಶೋಕ ಶೆಟ್ಟಿ, ಶಂಕರ ಶೆಟ್ಟಿ, ಅಭಿಷೇಕ್, ಚಂದ್ರ ಮಾಸ್ಟರ್, ಸಂದೇಶ ಎಂಬವರು ಸಾರ್ವಜನಿಕ ಸ್ಥಳದಲ್ಲಿ ಮೈ, ಕೈ ಮಿಲಾಯಿಸಿ ಗಲಾಟೆ ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗವನ್ನುಂಟು ಮಾಡಿದ್ದಾರೆಂದು ದೂರಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

