Breaking News

ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ

ಹಾಸನ ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ನಾಲ್ವರಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್​ನಲ್ಲಿದ್ದ ಗ್ಯಾಸ್ ಖಾಲಿಯಾದ ಹಿನ್ನೆಲೆಯಲ್ಲಿ ಬದಲಾವಣೆ ಮುಂದಾಗಿದ್ದಾರೆ. ಗ್ಯಾಸ್ ತುಂಬಿದ್ದ ಸಿಲಿಂಡರ್​ಗೆ ರೆಗ್ಯುಲೇಟರ್ ಅಳವಡಿಸುವಾಗ ಅಡುಗೆ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟವಾಗಿದೆ. ಮಹಿಳೆ, ಪುತ್ರ ಸೇರಿದಂತೆ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸುಂದರೇಶ್ ಮನೆಯಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!

ದೊಡ್ಡಬಳ್ಳಾಪುರ: ಹೋಟೆಲ್‌ನಲ್ಲಿ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ …

Leave a Reply

Your email address will not be published. Required fields are marked *